Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:7 - ಕನ್ನಡ ಸತ್ಯವೇದವು C.L. Bible (BSI)

7 ಹಿಂಸಕರಿಂದ ಸಂರಕ್ಷಿಸುವಾತ ನೀನೆ I ಹಗೆಗಳಿಗೆ ಆಶಾಭಂಗ ತರುವಾತ ನೀನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಿಂಸಕರಿಂದ ಬಿಡಿಸಿದವನು ನೀನೇ; ನೀನೇ ಹಗೆಗಳಿಗೆ ಆಶಾಭಂಗಪಡಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ. ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನೀವು ನಮ್ಮ ವೈರಿಗಳ ಮೇಲೆ ನಮಗೆ ಜಯವನ್ನು ಕೊಟ್ಟಿದ್ದೀರಿ. ನೀವು ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:7
19 ತಿಳಿವುಗಳ ಹೋಲಿಕೆ  

ಸ್ವಾಮಿದೇವಾ, ನೀನೆನಗೆ ದುರ್ಗಸ್ಥಾನ I ರಣರಂಗದಲಿ ನೀನೆನಗೆ ಶಿರಸ್ತ್ರಾಣ II


ಶತ್ರುಹಗೆಗಳಿಂದ ನಮ್ಮನ್ನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ತೊಡಿಸುವೆನು ಅವನ ವೈರಿಗಳಿಗೆ ಲಜ್ಜಾಕವಚವನು I ಮುಡಿಸುವೆನು ಅವನಿಗಾದರೋ ಪ್ರಜ್ವಲ ಕಿರೀಟವನು” II


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ನನ್ನ ಕೊಲೆಗೆಂದು ಯತ್ನಿಸುವವರು ನಾಚಿ ಗಲಿಬಿಲಿಗೊಳ್ಳಲಿ I ನನ್ನಳಿವನು ಕೋರುವಂಥವರು ಲಜ್ಜೆಯಿಂದ ಹಿಂದಿರುಗಲಿ II


ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು.


ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು.


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು