Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:1 - ಕನ್ನಡ ಸತ್ಯವೇದವು C.L. Bible (BSI)

1 ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:1
23 ತಿಳಿವುಗಳ ಹೋಲಿಕೆ  

ನನ್ನ ಬಾಯಿ ಬೋಧಿಸುವುದು ಸುಜ್ಞಾನವನು I ನನ್ನ ಮನ ಧ್ಯಾನಿಸುವುದು ವಿವೇಚನೆಯನು II


ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.


ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ ನನ್ನ ಬಾಯೊಳಿತ್ತು ಆತನ ವಾಕ್ಯ.


ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು : ಪ್ರಿಯತಮನಿಗೆ ಇತ್ತೊಂದು ದ್ರಾಕ್ಷಿಯ ತೋಟ ಫಲವತ್ತಾಗಿಹ ಗುಡ್ಡದ ಮೇಲಿನ ತೋಟ. ಆರಿಸಿ ಎಸೆದನು ಕಲ್ಲುಮುಳ್ಳುಗಳನು ಅಗೆದು ಹದಮಾಡಿದನಾತ ಗುಡ್ಡವನು.


ಒಡನೆ ಕೈ ನೀಡಿ ಕಾಪಾಡು ದೇವಾ I ಕುತ್ತಿಗೆಗೆ ಬಂದಿದೆ ತುಂಬು ಪ್ರವಾಹ II


ಸರಿಯಾದುದನ್ನೇ ಆಯ್ದುಕೊಳ್ಳೋಣ ಒಳಿತಾದುದನ್ನು ನಮ್ಮ ನಮ್ಮಲ್ಲೇ ನಿಶ್ಚಯಿಸಿಕೊಳ್ಳೋಣ.


ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.


“ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು.


ಅತ್ತ ರಾಜನು ಮಂಚದ ಮೇಲೆ ಮಲಗಿಕೊಂಡಿರಲು ಇತ್ತ ಬೀರುತ್ತಿತ್ತು ನನ್ನ ಪರಿಮಳ ತೈಲ ಸುವಾಸನೆಯನು.


ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು