Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:8 - ಕನ್ನಡ ಸತ್ಯವೇದವು C.L. Bible (BSI)

8 ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:8
20 ತಿಳಿವುಗಳ ಹೋಲಿಕೆ  

ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.


ಈತನು ಮಾತ್ರವಲ್ಲ, ಹಿಂದೊಮ್ಮೆ ಯೇಸುವನ್ನು ರಾತ್ರಿಯಲ್ಲಿ ನೋಡಲು ಬಂದಿದ್ದ ನಿಕೊದೇಮನು ಕೂಡ ಅಲ್ಲಿಗೆ ಬಂದನು. ಇವನು ರಕ್ತಬೋಳ ಹಾಗೂ ಅಗರು ಕಲಸಿದ ಮೂವತ್ತು ಕಿಲೋಗ್ರಾಮಿನಷ್ಟು ಚೂರ್ಣವನ್ನು ತಂದಿದ್ದನು.


ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.


ಚಳಿಗಾಲ, ಬೇಸಿಗೆಕಾಲಗಳ ವಿಹಾರಗೃಹಗಳನ್ನು ವಿನಾಶಮಾಡುವೆನು. ದಂತನಿರ್ಮಿತ ಮಂದಿರಗಳು ಧ್ವಂಸವಾಗುವುವು. ಮಹಾಸೌಧಗಳು ನೆಲಸಮವಾಗುವುವು. ಸರ್ವೇಶ್ವರಸ್ವಾಮಿಯ ನುಡಿಯಿದು.”


ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು.


ಎದ್ದೆ ನಾನು ನಲ್ಲನಿಗೆ ಬಾಗಿಲ ತೆರೆಯಲೆಂದು ಅಗುಳಿಯ ಮೇಲೆ ತೊಟ್ಟಿಕ್ಕಿತು ಪರಿಮಳ ನನ್ನ ಕೈಗಳಿಂದ ಆ ರಸಗಂಧ ದ್ರವ್ಯ ನನ್ನ ಬೆರಳುಗಳಿಂದ.


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


ನನ್ನ ಭಾಗ್ಯಕ್ಕೆ ನನ್ನ ನಲ್ಲ ಸ್ತನಗಳ ಮಧ್ಯೆಯಿರುವ ಪರಿಮಳ ಚೀಲ.


ಆತನನ್ನು ಸ್ತುತಿಸಿರಿ ತಮಟೆ ಬಡಿಯುತಾ ಕುಣಿಯುತಾ I ಆತನನ್ನು ಸ್ತುತಿಸಿರಿ ತಂತಿವಾದ್ಯ ನುಡಿಸುತಾ ಕೊಳಲೂದುತಾ II


ಅಹಾಬನ ಉಳಿದ ಚರಿತ್ರೆ, ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು, ಇವುಗಳ ವಿವರ, ಹಾಗು ಅವನ ಬೇರೆ ಕಾರ್ಯಸಾಧನೆಗಳು ಇಸ್ರಯೇಲರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಆಗಮಿಸುತಿಹರಿದೋ ಸಂಭ್ರಮ ಸಡಗರದಿಂದ I ಪ್ರವೇಶಿಸುತಿಹರು ಅರಮನೆಯನು ಉತ್ಸಾಹದಿಂದ II


ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು