Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 46:10 - ಕನ್ನಡ ಸತ್ಯವೇದವು C.L. Bible (BSI)

10 ‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಿಡಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 46:10
26 ತಿಳಿವುಗಳ ಹೋಲಿಕೆ  

ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ನನ್ನ ತಂದೆತಾತಂದಿರು ಗೋಜಾನ್, ಖಾರನ್, ರೆಚೆಫ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


ಯೆಹೋಶುವನು ಸರ್ವೇಶ್ವರನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಟ್ಟನು.


ಮುರಿದು ಬಿದ್ದಿವೆ ಶೂರರ ಬಿಲ್ಲುಬಾಣಗಳು ದುರ್ಬಲರಾದರೋ ಶೌರ್ಯದ ನಡುಕಟ್ಟಿ ನಿಂತಿಹರು.


ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ, ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಸಿರಿಯಾದ ಗುಂಪುಗಳು ಇಸ್ರಯೇಲರ ಪ್ರಾಂತದೊಳಗೆ ಮತ್ತೆ ಬರಲಿಲ್ಲ.


ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆಂದರು - “ಇಗೋ, ಏಲಾಮಿನ ಮುಖ್ಯ ಬಲವಾದ ಬಿಲ್ಲನ್ನು ಮುರಿದುಬಿಡುವೆನು.


ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು.


ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು