Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 46:5 - ಕನ್ನಡ ಸತ್ಯವೇದವು C.L. Bible (BSI)

5 ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 46:5
24 ತಿಳಿವುಗಳ ಹೋಲಿಕೆ  

ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಅಚಲನಾಗಿರುವನು ನೀತಿವಂತನು I ಮರೆಯಲಾರರು ಎಂದಿಗೂ ಆತನನು II


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.


ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II


ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ಅಂತೆಯೇ ಮೋಶೆ ಸಮುದ್ರದ ಮೇಲೆ ಕೈ ಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.


ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.


ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು