Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:5 - ಕನ್ನಡ ಸತ್ಯವೇದವು C.L. Bible (BSI)

5 ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:5
26 ತಿಳಿವುಗಳ ಹೋಲಿಕೆ  

ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ಆತನನ್ನು ಸ್ತುತಿಸಿರಿ ಕೊಂಬುಗಳನ್ನೂದುತಾ I ಸ್ವರಮಂಡಲಗಳನು, ಕಿನ್ನರಿಗಳನು ಬಾರಿಸುತಾ II


ಪ್ರಭುವೆದ್ದನು ನಿದ್ರೆಯಿಂದಲೋ ಎಂಬಂತೆ I ಮಧುವಿನ ಅಮಲಿನಿಂದೆಚ್ಚೆತ್ತ ಬಲಿಷ್ಠನಂತೆ II


ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರ ಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದರು.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿ ಕೇಳುತ್ತಲೇ ನೀವೆಲ್ಲರು ಗಟ್ಟಿಯಾಗಿ ಕೇಕೆ ಹಾಕಿ ಆರ್ಭಟಿಸಿರಿ. ಆಗ ನಗರದ ಗೋಡೆ ತಾನೇ ತಾನಾಗಿ ಬಿದ್ದುಹೋಗುವುದು. ಆಗ ಪ್ರತಿಯೊಬ್ಬನು ನೆಟ್ಟಗೆ ಒಳನುಗ್ಗಬಹುದು,” ಎಂದು ಹೇಳಿದರು.


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಊದಿರಿ ಕೊಂಬನು, ತುತೂರಿಯನು I ಉದ್ಘೋಷಿಸಿರಿ ಪ್ರಭು ರಾಜನನು II


ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II


ಸ್ತುತಿಗೀತೆಗಳನ್ನು ಹಾಡುವಾಗ ತುತೂರಿ, ತಾಳ, ಮತ್ತಿತರ ವಾದ್ಯಗಳನ್ನು ಬಾರಿಸುವವರ ಮೇಲ್ವಿಚಾರಣೆಯೂ ಹೇಮಾನ್ ಮತ್ತು ಯೆದುತೂನರದಾಗಿತ್ತು. ಯೆದುತೂನನ ಮಕ್ಕಳಿಗೆ ದ್ವಾರಗಳನ್ನು ಕಾಯುವ ಹೊಣೆಯೂ ಇತ್ತು.


ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು