Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:8 - ಕನ್ನಡ ಸತ್ಯವೇದವು C.L. Bible (BSI)

8 ವಹಿಸಿಕೊಂಡನು ದೇವನು ಸರ್ವಾಧಿಪತ್ಯ I ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:8
18 ತಿಳಿವುಗಳ ಹೋಲಿಕೆ  

“ಹರ್ಷಿಸಲಿ ಆಕಾಶ, ಸಂತೋಷಿಸಲಿ ಭೂಲೋಕ I ಗರ್ಜಿಸಲಿ ಸಮುದ್ರ ಮತ್ತು ಅದರೊಳಿರುವುದೆಲ್ಲ I ಸಾರಲಿ ರಾಷ್ಟ್ರಗಳಿಗೆ ಸರ್ವೇಶ್ವರ ರಾಜನೆಂದು I ಧರೆಗೆ ನ್ಯಾಯತೀರಿಸಲು ಖಂಡಿತ ಬರುವನೆಂದು II


ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು : “ಅಲ್ಲೆಲೂಯ ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ನ್ಯಾಯಪೀಠದಲಿ ಕುಳಿತೆನ್ನ ವ್ಯಾಜ್ಯ ತೀರಿಸಿದೆ I ನೀತಿಗನುಸಾರವಾಗಿ ನ್ಯಾಯ ಸ್ಥಾಪಿಸಿದೆ II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ಇದೆ ಪ್ರಭುವಿನ ಕೈಯಲಿ ರಾಜ್ಯಾಧಿಕಾರ I ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ I ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ II


ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II


ಅನ್ಯಾಯಸ್ಥಾಪಕರಿಗೂ ನಿನಗೂ ಸಂಬಂಧವೆಲ್ಲಿ I ಕೇಡನು ಕಲ್ಪಿಸುತ್ತಾರವರು ಶಾಸನದ ಹೆಸರಿನಲ್ಲಿ II


ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II


ಸಿಯೋನಿನಲಿ ಪ್ರಭು ಶ್ರೇಷ್ಠನು I ರಾಷ್ಟ್ರಗಳಲ್ಲೆಲ್ಲಾ ಉತ್ಕೃಷ್ಠನು II


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು