Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:2 - ಕನ್ನಡ ಸತ್ಯವೇದವು C.L. Bible (BSI)

2 ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ ರಮ್ಯವಾಗಿಯೂ ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:2
21 ತಿಳಿವುಗಳ ಹೋಲಿಕೆ  

ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ;


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ.


ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು, ಬಹುದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ಚೆಲುವಿನ ನಾಡಾದ ಪಾಲೆಸ್ತೀನಿನ ಕಡೆಗೂ ಪ್ರಬಲಗೊಂಡಿತು.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II


ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಜೆರುಸಲೇಮಿನಲ್ಲಿ ವಾಸಿಸುವ ಪ್ರಭು ಘನಹೊಂದಲಿ I ಆತನ ಕೀರ್ತಿ ಸಿಯೋನಿನಿಂದ ಹಬ್ಬಿಹರಡಲಿ I ಅಲ್ಲೆಲೂಯ! II


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು