Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:1 - ಕನ್ನಡ ಸತ್ಯವೇದವು C.L. Bible (BSI)

1 ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:1
35 ತಿಳಿವುಗಳ ಹೋಲಿಕೆ  

ಪ್ರಭುವಿನಾ ಸಿರಿನಾಮವು ಸ್ತುತ್ಯ I ಪೂರ್ವ ಪಶ್ಚಿಮದವರೆಗೂ ಸ್ತುತ್ಯ II


ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು.


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಹೇ ಸರ್ವೇಶ್ವರಾ, ನಿಮಗೆ ಸಮಾನನು ಇಲ್ಲ, ನೀವು ಮಹೋತ್ತಮರು ಸಾಮರ್ಥ್ಯದಿಂದ ಕೂಡಿರುವ ನಿಮ್ಮ ನಾಮವೂ ಮಹತ್ತರವಾದುದು.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II


ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.


ಆಸಾಫ್ಯರಲ್ಲಿ ಜಕ್ಕೂರ್, ಜೋಸೆಫ್, ನೆತನ್ಯ, ಅಶರೇಲ ಎಂಬವರು. ಇವರು ಆಸ್ಥಾನದ ಗಾಯಕ ಆಸಾಫನ ಸಹಾಯಕರು.


ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು.


ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.


ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ತಹತ್, ಉರೀಯೇಲ್, ಉಜ್ಜೀಯ ಮತ್ತು ಸೌಲ್.


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ವಂದನೆ ಹೇ ದೇವಾ, ಕೃತಜ್ಞತಾ ವಂದನೆ I ನೀ ಸಾಧಿಸಿದ ಸತ್ಕಾರ್ಯಗಳ ವಿವರಣೆ I ತಂದಿದೆ ನಮಗೆ ನಿನ್ನ ನಾಮದ ಸ್ಮರಣೆ II


ಸುಪ್ರಸಿದ್ಧನು ದೇವನು ಜುದೇಯನಾಡಿನಲಿ I ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ II


ಮೊರೆಯಿಡುವೆನು, ಕೂಗಿ ಮೊರೆಯಿಡುವೆನು I ಸ್ವಾಮಿ ದೇವನು ನನಗೆ ಕಿವಿಗೊಡುವನು II


ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ I ಗಮನಕೊಡಿ ನಾ ಹೇಳುವ ಮಾತುಗಳಿಗೆ II


ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಹಾಡಿರಿ ಶುಭಗೀತೆಯನು ಬಲಪ್ರದನಾದ ದೇವನಿಗೆ I ಮಾಡಿರಿ ಜಯಜಯಕಾರವನು ಯಕೋಬ ಕುಲದೇವನಿಗೆ II


ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು