Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:10 - ಕನ್ನಡ ಸತ್ಯವೇದವು C.L. Bible (BSI)

10 ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸಿ ನನ್ನನ್ನು ನೂತನಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:10
26 ತಿಳಿವುಗಳ ಹೋಲಿಕೆ  

ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


“ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು?


ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು