Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:6 - ಕನ್ನಡ ಸತ್ಯವೇದವು C.L. Bible (BSI)

6 ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ದೇವರು ತನ್ನ ಪ್ರಜೆಗೆ ಮರಳಿ ಸಿರಿಸಂಪದ I ನೀಡಲಿ ಯಕೋಬ ಮೇಣ್ ಇಸ್ರಯೇಲ ಜನತೆಗೆ ಹರ್ಷಾನಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:6
18 ತಿಳಿವುಗಳ ಹೋಲಿಕೆ  

ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.


ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.


ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು