Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:1 - ಕನ್ನಡ ಸತ್ಯವೇದವು C.L. Bible (BSI)

1 “ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:1
34 ತಿಳಿವುಗಳ ಹೋಲಿಕೆ  

ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II


ನನಗೆ ನೀನು ನಿರಂತರದ ಸಹಾಯಕ I ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ II


ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು I ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು II


ಪ್ರಭುವನೆ ನಿನ್ನಾಶ್ರಯವಾಗಿಸಿಕೊಂಡಿರುವುದರಿಂದ I ಪರಾತ್ಪರನನೆ ನಿನ್ನ ನಿವಾಸ ಆಗಿಸಿಕೊಂಡದ್ದರಿಂದ II


ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಮೊರೆಯಿಡುವೆನು ನಾನು ಪ್ರಭುವಿಗೆ I ಸ್ವರವೆತ್ತಿ ಬೇಡುವೆನು ಆತನಿಗೆ II


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಶತ್ರುಗಳಿಂದ ದೇವಾ, ತಪ್ಪಿಸು I ಎದುರಾಳಿಗಳಿಂದೆನ್ನ ರಕ್ಷಿಸು II


ಜನನಾಯಕರೇ, ನ್ಯಾಯಬದ್ಧವೊ ನಿಮ್ಮ ತೀರ್ಪುಗಳು I ವ್ಯಾಜ್ಯಗಳನು ಬಗೆಹರಿಸುತ್ತವೆಯೆ ನಿಮ್ಮ ನಿರ್ಣಯಗಳು? II


ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು.


ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕಾಗಿ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.


ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,


ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.


ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.


ವಂದನೆ ಹೇ ದೇವಾ, ಕೃತಜ್ಞತಾ ವಂದನೆ I ನೀ ಸಾಧಿಸಿದ ಸತ್ಕಾರ್ಯಗಳ ವಿವರಣೆ I ತಂದಿದೆ ನಮಗೆ ನಿನ್ನ ನಾಮದ ಸ್ಮರಣೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು