Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:16 - ಕನ್ನಡ ಸತ್ಯವೇದವು C.L. Bible (BSI)

16 ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:16
31 ತಿಳಿವುಗಳ ಹೋಲಿಕೆ  

ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ‍ ಪ್ರಭೂ, ನಿನ್ನನೆ ಹಾಡಿಹೊಗಳುವೆನು II


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II


ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II


ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II


ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ಆದರೂ ತನ್ನ ನಾಮಪ್ರಯುಕ್ತ ರಕ್ಷಿಸಿದನವರನು I ಪ್ರಕಟಿಸಿದನಾತ ಹೀಗೆ ತನ್ನ ಶಕ್ತಿಸಾಮರ್ಥ್ಯವನು II


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಹೊಟ್ಟೆಪಾಡಿಗಾಗಿ ಹುಡುಕುತ್ತಾ ಅಲೆದಾಡುತ್ತಾನೆ ಆ ಕತ್ತಲ ದಿನ ಹತ್ತಿರವಿದೆಯೆಂದು ಅರಿತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು