Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:2 - ಕನ್ನಡ ಸತ್ಯವೇದವು C.L. Bible (BSI)

2 ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ತತ್ತರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:2
21 ತಿಳಿವುಗಳ ಹೋಲಿಕೆ  

ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II


‘ಹೇ ಪ್ರಭು, ಎನ್ನ ದೇವಾ ‘ ಎಂದೆ I ನಾ ಮೊರೆಯಿಡೆ, ನೀ ಗುಣಪಡಿಸಿದೆ II


ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !


ಹರ್ಷಾನಂದವನು ಮೊಳಗಿಸೆನ್ನೊಳು I ಪುಳಕಗೊಳ್ಳುವುವು ನೀ ಮುರಿದೆಲುಬುಗಳು II


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಉರಿಬಡಿದಂತಿದೆ ಎನ್ನ ಸೊಂಟಕೆ I ಆರೋಗ್ಯವಿಲ್ಲದಿದೆ ದೇಹಕೆ II


ನನ್ನ ದೇಹದಲ್ಲಿಲ್ಲ ಸೌಖ್ಯ ನಿನ್ನ ಕೋಪದ ನಿಮಿತ್ತ I ನನ್ನೆಲುಬಿನಲ್ಲಿಲ್ಲ ಕ್ಷೇಮ ನನ್ನ ಪಾಪದ ಪ್ರಯುಕ್ತ II


ಪಾಪ ನಿವೇದನೆ ಮಾಡದೆ ನಾ ಮೌನದಿಂದಿರಲು I ದಿನವೆಲ್ಲ ನರಳಿ ಸವೆದುಹೋದವು ನನ್ನೆಲುಬುಗಳು II


ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಆಗ ಮೋಶೆ ಸರ್ವೇಶ್ವರನಿಗೆ, “ಹೇ ದೇವಾ, ಆಕೆಯನ್ನು ಗುಣಪಡಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಮೊರೆಯಿಟ್ಟನು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ.


ನಿನ್ನ ಬಾಣಗಳು ನಾಟಿವೆ ನನ್ನೊಳಗೆ I ನಿನ್ನ ಹಸ್ತವು ಎರಗಿದೆ ನನ್ನ ಮೇಲೆ II


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು