Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:1 - ಕನ್ನಡ ಸತ್ಯವೇದವು C.L. Bible (BSI)

1 ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಕೋಪದಿಂದ ನಮ್ಮನ್ನು ತಳ್ಳಿಕೆಡವಿ ಬಿಟ್ಟಿದ್ದೀ; ನಮ್ಮನ್ನು ಎತ್ತಿ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಪುನರ್‌ಸ್ಥಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:1
36 ತಿಳಿವುಗಳ ಹೋಲಿಕೆ  

ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.


ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II


ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.


ಆದುದರಿಂದ ಅವನು ಹೋಗಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ಸರ್ವೇಶ್ವರ ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ ಆ ಯುದ್ಧಸ್ಥಳಕ್ಕೆ, ‘ಬಾಳ್ ಪೆರಾಚೀಮ್’ ಎಂದು ಹೆಸರಿಟ್ಟನು.


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II


ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II


ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ I ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ : II


ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ದೇವಾ ನೀ, ನಮ್ಮನು ಕೈ ಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯ ಸಮೇತ ನೀ ಬರದೆಹೋದೆಯೋ? II


ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II


ಶತ್ರುಗಳಿಂದ ದೇವಾ, ತಪ್ಪಿಸು I ಎದುರಾಳಿಗಳಿಂದೆನ್ನ ರಕ್ಷಿಸು II


ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ಕಣಿವೆಗೆ ಹೋಗಿ, ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಸಮುವೇಲನು, ಅವನನ್ನು ನೋಡಿ, “ಇದೇನು ನೀನು ಮಾಡಿದ್ದು?” ಎಂದು ಕೇಳಿದನು. ಅವನು, “ಜನರು ಚದರಿಹೋಗುವುದನ್ನು, ನೀವು ನಿಯಮಿತಕಾಲಕ್ಕೆ ಬಾರದಿರುವುದನ್ನು ಹಾಗು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನು ನೋಡಿದೆ;


ಅವನು ಏಲಿಗೆ, “ಇಸ್ರಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾ ಸಂಹಾರವಾಯಿತು. ನಿಮ್ಮ ಇಬ್ಬರು ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು,” ಎಂದು ತಿಳಿಸಿದನು.


ದೇವಾ, ನೀ ನಮ್ಮನು ಕೈಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯಸಮೇತ ನೀ ಬರದೆ ಹೋದೆಯೋ? II


ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ಹದದೆಜೆರನು ಯೂಫ್ರಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಬರಮಾಡಿದನು; ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ಇಂತೆಂದ ನೀನೆ ತ್ಯಜಿಸಿರುವೆ ನಿನ್ನಾಭಿಷಿಕ್ತನನು I ತಳ್ಳಿಬಿಟ್ಟಿರುವೆ ಕೋಪಾವೇಶದಿಂದ ಅವನನು II


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು