Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:2 - ಕನ್ನಡ ಸತ್ಯವೇದವು C.L. Bible (BSI)

2 ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ I ಅದರೊಡಕನು ಸರಿಮಾಡು ತಡವರಿಸದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ದೇಶವನ್ನು ಕಂಪನಗೊಳಿಸಿ ಒಡೆದು ಬಿಟ್ಟಿದ್ದೀ. ಅದರ ಒಡಕುಗಳನ್ನು ಸರಿಮಾಡು; ಅದು ನಡುಗುತ್ತಿರುವದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿರುವೆ. ನಮ್ಮ ದೇಶವು ಕುಸಿದುಬೀಳುತ್ತಿದೆ; ಅದನ್ನು ಸರಿಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:2
30 ತಿಳಿವುಗಳ ಹೋಲಿಕೆ  

ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ನಡುಗು ಭೂಲೋಕವೇ, ಪ್ರಭುವಿನ ಮುಂದೆ I ನಡುನಡುಗು ಯಕೋಬ ದೇವರ ಮುಂದೆ II


ಅದರ ಸ್ಥಾನದಿಂದ ಭೂಮಿಯನೆ ಕದಲಿಸುತ್ತಾನೆ ಅದರ ಸ್ತಂಭಗಳು ನಡುಗುವಂತೆ ಮಾಡುತ್ತಾನೆ.


ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.


ನಡುಗುತ್ತದೆ ಭೂಮಂಡಲ ಆತನ ಕೃತ್ಯಕೆ I ಹೊಗೆಕಾರುತ್ತದೆ ಪರ್ವತ ಆತನ ಸ್ಪರ್ಶಕೆ II


ಸೀಳಿಬಿಟ್ಟಿರುವೆ ಅವನಾ ಪೌಳಿಗೋಡೆಗಳನು I ಹಾಳುಮಾಡಿಬಿಟ್ಟಿರುವೆ ಕೋಟೆಕೊತ್ತಲಗಳನು II


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಆಗ ಕಂಪಿಸಿತು ಭೂಮಿ ಗಡಗಡನೆ ಕದಲಿದವು ಆಗಸದಸ್ತಿವಾರಗಳು ಮಿಲಮಿಲನೆ ಏಕೆನೆ ಸಿಟ್ಟೇರಿತ್ತು ಆತನಿಗೆ.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.


ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು;


ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು