Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:6 - ಕನ್ನಡ ಸತ್ಯವೇದವು C.L. Bible (BSI)

6 ಗರ್ಭಗುಡಿಯಿಂದಲೇ ದೇವನಿಂತೆಂದನು; “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದು ಕೊಡುವೆನು ಸುಖೋತೆಂಬ ಬಯಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬೈಲನ್ನು ಅಳೆದುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ತನ್ನ ಆಲಯದೊಳಗೆ ಹೀಗೆಂದನು: “ನಾನು ಅವರಿಗೆ ಶೆಕೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:6
21 ತಿಳಿವುಗಳ ಹೋಲಿಕೆ  

ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.


ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.


ಮಾಡಿರುವೆ ಪ್ರಮಾಣ ನನ್ನ ಪವಿತ್ರತೆಯ ಮೇಲೆ I ಸುಳ್ಳಾಡಲಾರೆ ದಾವೀದನಿಗೀ ವಿಷಯದ ಮೇಲೆ II


“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.


ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II


ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಪ್ರವಾದಿಗಳ ವಿಷಯ : ನನ್ನ ಗುಂಡಿಗೆ ಒಡೆದುಹೋಗಿದೆ ನನ್ನೆಲುಬುಗಳು ನಡುನಡುಗುತ್ತಿವೆ ಸರ್ವೇಶ್ವರನಿಗೆ, ಆತನ ಪವಿತ್ರವಾಕ್ಯಕ್ಕೆ ಪರವಶನಾದ ನಾನು ಅಮಲೇರಿದಂತವನಾದೆ. ಹೌದು, ಮದ್ಯಪಾನಕ್ಕೆ ಸೋತ ಮನುಷ್ಯನಂತಾದೆ.


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II


ಸರ್ವೇಶ್ವರ ದಾವೀದನ ವಿಷಯವಾಗಿ, “ನನ್ನ ದಾಸ ದಾವೀದನ ಮುಖಾಂತರ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸುವೆನು,” ಎಂದು ನುಡಿದಿದ್ದಾರಲ್ಲವೇ? ಎಂದು ಹೇಳಿಸಿದನು.


ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು.


ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು