Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 67:4 - ಕನ್ನಡ ಸತ್ಯವೇದವು C.L. Bible (BSI)

4 ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಆಳಿ ಭೂಪ್ರಜೆಗಳನ್ನೆಲ್ಲಾ ನಡಿಸುವಾತನಾಗಿರುವದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 67:4
18 ತಿಳಿವುಗಳ ಹೋಲಿಕೆ  

ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಜಗಕೆ ನ್ಯಾಯ ತೀರಿಸುವನು ನೀತಿಗನುಸಾರ I ಜನಾಂಗಕೆ ತೀರ್ಪು ಕೊಡುವನು ಸತ್ಯಕ್ಕನುಸಾರ II


‘ನೀವು ದೇವರುಗಳು’, ‘ನೀವೆಲ್ಲರು ಪರಾತ್ಪರನ ಮಕ್ಕಳು’ ನಾನೆಂದೆ I ಆದರೂ ಅಳಿಯುವಿರಿ ಅರಸರಂತೆ, ಸಾಯುವಿರಿ ಬರಿ ಮಾನವರಂತೆ” II


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


“ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು