Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:1 - ಕನ್ನಡ ಸತ್ಯವೇದವು C.L. Bible (BSI)

1 ಎಚ್ಚರಗೊಳ್ಳಲಿ, ದೇವನೆಚ್ಚರಗೊಳ್ಳಲಿ I ಆತನ ಶತ್ರುಗಳೆಲ್ಲರು ಚದರಿಹೋಗಲಿ I ಆತನ ವಿರೋಧಿಗಳು ಪಲಾಯನ ಗೈಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ಎದ್ದು ಹೊರಡುವಾಗ ಆತನ ವೈರಿಗಳು ಚದರಿಹೋಗುವರು; ಆತನ ಹಗೆಗಾರರು ಬೆಂಗೊಟ್ಟು ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. ಆತನ ಶತ್ರುಗಳೆಲ್ಲಾ ಆತನ ಬಳಿಯಿಂದ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ಕ್ರಿಯಾಶೀಲರಾಗಲಿ. ಅವರ ಶತ್ರುಗಳು ಚದರಿಹೋಗಲಿ. ದೇವರನ್ನು ವಿರೋಧಿಸುವವರು ಅವರ ಸಮ್ಮುಖದಿಂದ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:1
21 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.


ಎದ್ದು ಬಂದು ಪ್ರಭು ನಿನ್ನ ನೆರವನ್ನೊದಗಿಸು I ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು II


ಚದರಿಸಿದೆ ನಿನ್ನ ಭುಜಬಲದಿಂದ ಶತ್ರುಗಳನು I ಛೇದಿಸಿ ಕೊಂದುಹಾಕಿದೆ ಆ ರಾಕ್ಷಸ ರಹಬನನು II


ನಿಮ್ಮ ಮೇಘಗರ್ಜನೆಗೆ ಜನಾಂಗಗಳು ಓಡುತ್ತವೆ. ನೀವು ಎದ್ದುನಿಂತಾಗ ರಾಷ್ಟ್ರಗಳು ದಿಕ್ಕುಪಾಲಾಗುತ್ತವೆ.


ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II


ಸರ್ವಶಕ್ತನು ಅರಸರನತ್ತ ಸದೆಬಡಿದಂತೆ I ಇತ್ತ ಬೀಳುತ್ತಿತ್ತು ಸಾಲ್ಮೋನ್ ಗಿರಿಮೇಲೆ ಹಿಮಗಡ್ಡೆ II


ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II


ಶತ್ರುಗಳೆಲ್ಲರು ಸಿಕ್ಕಿಹೋಗುವರು ನಿನ್ನ ಕೈಗೆ I ಹಗೆಗಳೆಲ್ಲ ಸಿಕ್ಕಿಬೀಳುವರು ನಿನ್ನ ಬಲಗೈಗೆ II


ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು