Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:13 - ಕನ್ನಡ ಸತ್ಯವೇದವು C.L. Bible (BSI)

13 ಪಾರಿವಾಳ ರೆಕ್ಕೆಗಳಂಥ ಕನಕದಾಕೃತಿಗಳಿದೋ I ಗರಿಗಳಂತೆ ಥಳಥಳಿಸುವ ಬಂಗಾರ ರೇಖೆಗಳಿದೋ I ನೀವಾದರೋ ಕುರಿದೊಡ್ಡಿಗಳಲ್ಲಿ ಬೆಚ್ಚನಿದ್ದಿರೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು. ಬಂಗಾರದ ಗರಿಗಳಿಂದ ಥಳಥಳಿಸುವ ಬೆಳ್ಳಿ ಹೊದಿಸಿರುವ ಪಾರಿವಾಳದ ರೆಕ್ಕೆಗಳನ್ನು ಅವರು ಪಡೆದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಪಾಳೆಯದ ಬೆಂಕಿಯ ಬಳಿ ಮಲಗಿದರೂ, ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಹೊಳೆಯುವಂತಿರುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:13
22 ತಿಳಿವುಗಳ ಹೋಲಿಕೆ  

ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II


ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು : I “ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು I ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು II


ಕೊಡಬೇಡ ನಿನ್ನ ಬೆಳವಕ್ಕಿಯ ಪ್ರಾಣವ ಕಾಡುಮೃಗಕೆ I ನೀ ಮರೆತುಬಿಡಬೇಡ ನಿನ್ನ ದೀನದಲಿತರನು ಒಮ್ಮೆಗೆ II


ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು: ರೂಬೇನ್ಯರೇ, ನೀವೇಕೆ ಕೂತಿರಿ ಕುರಿಹಟ್ಟಿಗಳಲಿ? ಮಂದೆಗಳ ಮಧ್ಯೆಯಲಿ ಕೇಳಬೇಕೆಂದೋ ಅಪಾಯದ ಸಿಳ್ಳು ಸದ್ದನು? ಹೌದು ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು.


ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.


ನೀವು ಅನ್ಯಮತಸ್ಥರಾಗಿದ್ದಾಗ, ನಿಮಗೆ ಮನಸ್ಸು ಬಂದಂತೆಲ್ಲಾ ಮೂಕ ವಿಗ್ರಹಗಳ ಬಳಿ ಹೋಗಿ ಬರುತ್ತಿದ್ದಿರಿ; ಇದನ್ನು ನೀವೇ ಬಲ್ಲಿರಿ.


ಅದನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಅರ್ಧವನ್ನೂ ಮಿಕ್ಕ ಸಮಾಜದವರಿಗೆ ಅರ್ಧವನ್ನೂ ಹಂಚಿಕೊಡಿ.


ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗವಿಯಲ್ಲಿ ಅವಿತುಕೊಂಡರು.


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಆಗ ಜನರು ಹೊರಗೆ ಹೋಗಿ, ಸಿರಿಯಾದವರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಸರ್ವೇಶ್ವರನ ಮಾತಿನಂತೆ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುತ್ತಿತ್ತು.


ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು