Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:6 - ಕನ್ನಡ ಸತ್ಯವೇದವು C.L. Bible (BSI)

6 ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದು ಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:6
21 ತಿಳಿವುಗಳ ಹೋಲಿಕೆ  

ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II


ನನ್ನ ನ್ಯಾಯವನು ನಿರ್ಣಯಿಸು ದೇವಾ ಎಚ್ಚೆತ್ತು I ನನ್ನ ವಿವಾದವನು ವಿಚಾರಿಸು ಪ್ರಭು ನೀನೆದ್ದು ನಿಂತು II


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ಸರ್ವೇಶ್ವರ ಹೀಗೆನ್ನೆತ್ತಾರೆ : “ಈಗ ಏಳುವೆನು. ಈಗಲೇ ಎದ್ದು ಸಿದ್ಧನಾಗುವೆನು. ಇದೀಗಲೇ ನನ್ನ ಮಹಿಮೆಯನ್ನು ತೋರಿಸುವೆನು.


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಎದ್ದು ಬಂದು ಪ್ರಭು ನಿನ್ನ ನೆರವನ್ನೊದಗಿಸು I ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು II


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಸ್ವಾಮಿ ವಾದಿಸುವುದಕ್ಕೆ ಸಿದ್ಧವಿದ್ದಾರೆ. ಅವರು ಜನರ ನ್ಯಾಯವನ್ನು ನಿರ್ಣಯಿಸುವುದಕ್ಕೆ ತಯಾರಾಗಿದ್ದಾರೆ.


ಸಾಧಿಸುವನು ಪ್ರಭು ನ್ಯಾಯನೀತಿಯನು I ದೊರಕಿಸುವನು ಶೋಷಿತರಿಗೆ ನ್ಯಾಯವನು II


ಪ್ರಭುವೆದ್ದನು ನಿದ್ರೆಯಿಂದಲೋ ಎಂಬಂತೆ I ಮಧುವಿನ ಅಮಲಿನಿಂದೆಚ್ಚೆತ್ತ ಬಲಿಷ್ಠನಂತೆ II


ಬಿಜಯಮಾಡು ಪಾಳುಬಿದ್ದಿರುವ ಹಳೆಯ ಆಲಯಕೆ I ಶತ್ರು ಕೆಡವಿಹನು ನೋಡು ಗರ್ಭಗುಡಿಯನೇ ಕೆಳಕೆ II


ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II


ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II


ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು