Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:9 - ಕನ್ನಡ ಸತ್ಯವೇದವು C.L. Bible (BSI)

9 ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:9
36 ತಿಳಿವುಗಳ ಹೋಲಿಕೆ  

ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಪ್ರಭು, ಪರಿಶೋಧಿಸಿರುವೆ ನೀ ನನ್ನನು I ಅರಿತುಕೊಂಡಿರುವೆ ಅಂತರಂಗವನು II


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ I ಅವನ ನಡತೆಗೆ ಆತನೆ ಮಾರ್ಗದರ್ಶನ II


ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II


ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II


ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಮುರಿದುಬಿಡು ಹೇ ದೇವಾ, ಆ ದುರುಳರ ಹಲ್ಲುಗಳನು I ಕಿತ್ತುಬಿಡು ಪ್ರಭು, ಆ ಪ್ರಾಯಸಿಂಹಗಳ ಕೋರೆಗಳನು II


ದಲಿತರಿಗೆ, ದಿಕ್ಕಿಲ್ಲದವರಿಗೆ ನ್ಯಾಯವನು ದೊರಕಿಸುವೆ I ಈ ಪರಿ ಇಳೆಮಾನವರ ತುಳಿತದಿಂದ ಪಾರುಮಾಡುವೆ II


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಆ ಮನುಷ್ಯನೇ ಈಕೆ ನನಗೆ ತಂಗಿಯಾಗಬೇಕೆಂದು ಹೇಳಿದ; ಈಕೆಯೂ ಆತನು ನನಗೆ ಅಣ್ಣನಾಗಬೇಕೆಂದು ಹೇಳಿದಳು. ಶುದ್ಧಮನಸ್ಸಿನಿಂದ ಹಾಗೂ ಶುದ್ಧಹಸ್ತದಿಂದ ಈ ಕಾರ್ಯಮಾಡಿದೆ,” ಎಂದನು.


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II


ದೇವರನು ತೊರೆದು ದುರುಳನಾಗದೆ I ನಾನನುಸರಿಸಿದೆ ಪ್ರಭುವಿನ ಮಾರ್ಗವನೆ II


ನನ್ನ ನ್ಯಾಯವನು ನಿರ್ಣಯಿಸು ದೇವಾ ಎಚ್ಚೆತ್ತು I ನನ್ನ ವಿವಾದವನು ವಿಚಾರಿಸು ಪ್ರಭು ನೀನೆದ್ದು ನಿಂತು II


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು