Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:18 - ಕನ್ನಡ ಸತ್ಯವೇದವು C.L. Bible (BSI)

18 ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:18
16 ತಿಳಿವುಗಳ ಹೋಲಿಕೆ  

ನಾನೇ ನಿಮಗೆ ಆಧಾರ ಮುಪ್ಪಿನ ತನಕ ಹೊತ್ತು ಸಲಹುವೆನು ನಿಮ್ಮನು ನರೆಬಂದಾಗ. ಉಂಟುಮಾಡಿದವನು ನಾನೇ, ಹೊರುವವನು ನಾನೇ ಹೌದು, ನಿಮ್ಮನು ಹೊತ್ತು ಸಲಹುವವನು ನಾನೇ.


ವೃದ್ಧಾಪ್ಯದಲಿ ನನ್ನ ತಳ್ಳಿಬಿಡಬೇಡಯ್ಯಾ I ಶಕ್ತಿ ಕುಂದುತ್ತಿರುವಾಗ ಕೈಬಿಡಬೇಡಯ್ಯಾ II


ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II


“ಗೊತ್ತಾಗಲಿ ಇವೆಲ್ಲ ಮುಂದಿನ ತಲೆಮಾರಿಗೆ I ತಿಳಿಸುತ್ತ ಹೋಗಲಿ ಮಕ್ಕಳು ಮೊಮ್ಮಕ್ಕಳಿಗೆ” II


ಸಾರುವರು ಮುಂದಿನ ಜನತೆಗುದ್ಧಾರವನು I ಅರುಹುವರು ಆತನೆಸಗಿದ ಮಹತ್ಕಾರ್ಯವನು II


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಮುದುಕನೂ ಸ್ಥೂಲಕಾಯನೂ ಆದ ಏಲಿ ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದ್ದೇ, ಪೀಠದಿಂದ ಹಿಂದಕ್ಕೆ, ಬಾಗಿಲಿನ ಕಡೆಗೆ ಬಿದ್ದು, ಕುತ್ತಿಗೆ ಮುರಿದು ಸತ್ತನು. ಏಲಿ ಇಸ್ರಯೇಲರನ್ನು ನಾಲ್ವತ್ತು ವರ್ಷ ಪಾಲಿಸಿದ್ದನು.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ಏಲಿ ಆಗ ತೊಂಬತ್ತೆಂಟು ವರ್ಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.


ಆ ದಿನ ನೀವು ನಿಮ್ಮ ಮಕ್ಕಳಿಗೆ, “ನಮ್ಮ ಜನರು ಈಜಿಪ್ಟಿನಿಂದ ಹೊರಟು ಬಂದಾಗ ಸರ್ವೇಶ್ವರ ನಮಗೋಸ್ಕರ ಮಾಡಿದ ಉಪಕಾರವನ್ನು ಸ್ಮರಿಸುವುದಕ್ಕಾಗಿ ಈ ಆಚರಣೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಬೇಕು. ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದ್ದರಿಂದ ಅವರ ನಿಯಮ ನಮ್ಮ ಬಾಯಿಗೆ ಬರುತ್ತಿರಬೇಕು.


ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮಬ್ಬಾಯಿತು. ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು, "ಮಗನೇ,” ಎನ್ನಲು ಏಸಾವನು, “ಇಗೋ, ಇಲ್ಲೇ ಇದ್ದೇನೆ,” ಎಂದನು.


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು