Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:19 - ಕನ್ನಡ ಸತ್ಯವೇದವು C.L. Bible (BSI)

19 ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:19
18 ತಿಳಿವುಗಳ ಹೋಲಿಕೆ  

ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II


ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.


ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ದಿಗ್ಭ್ರಾಂತನಾಗಿ ನೆಲದ ಮೇಲೆ ಕೈಕಾಲು ಚಾಚಿಬಿದ್ದನು. ಅವನು ಇಡೀ ದಿವಸ ಊಟಮಾಡಿರಲಿಲ್ಲ. ಆದುದರಿಂದ ಅವನಲ್ಲಿ ಬಲವೇ ಇರಲಿಲ್ಲ.


“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.


ಸರ್ವೇಶ್ವರ ವಿಧಿಸಿದ ದಂಡನೆಯ ನಿಮಿತ್ತ ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಸತ್ತುಹೋದನು.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು