Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:6 - ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕೋಬವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ ಅಶ್ವಬಲವೂ ಮೈಮರೆತು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:6
20 ತಿಳಿವುಗಳ ಹೋಲಿಕೆ  

ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.”


ಅದನು ಬೆರಣಿಯಂತೆ ಸುಟ್ಟುಹಾಕಿದವರಾದರೋ I ನಿನ್ನ ಕೋಪದೃಷ್ಟಿಯಿಂದಲೆ ನಾಶವಾಗುವರು II


ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.


“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ಅವರು ಹೊಟ್ಟೆಬಾಕರೇ ಸರಿ. ಅವರಿಗೆ ಔತಣವನ್ನು ಸಿದ್ಧಮಾಡುವೆನು. ತಿಂದು ಸಂಭ್ರಮಪಡುವಂತೆ ಮಾಡುವೆನು. ತಲೆಗೇರುವತನಕ ಕುಡಿಸಿ ಎಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆಯಲ್ಲಿರುವಂತೆ ಮಾಡುವೆನು.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ತಲೆದೋರಿತು ಜಲ ನಿನ್ನ ಗದರಿಕೆಗೆ I ಹೆದರಿ ಹಿಂಜರಿಯಿತು ನಿನ್ನ ಗರ್ಜನೆಗೆ II


ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ಆದರೆ ಇಸ್ರಯೇಲರ ಮುಂದೆ ಸೋತು ಓಡಿಹೋದರು; ದಾವೀದನು ಸಿರಿಯಾದವರ ಏಳುನೂರು ರಥಗಳನ್ನು ಹಾಳುಮಾಡಿದನು. ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಕೊಂದನು. ಸೇನಾಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.


ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು.


ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು


ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು