Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:7 - ಕನ್ನಡ ಸತ್ಯವೇದವು C.L. Bible (BSI)

7 ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಮಹಾಭಯಂಕರನು; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:7
15 ತಿಳಿವುಗಳ ಹೋಲಿಕೆ  

ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಫರೋಹನ ರಥಗಳನು, ಸೈನಿಕರನು ಕೆಡವಿಬಿಟ್ಟನಾತ ಕಡಲಲಿ ಫರೋಹನ ವೀರ ಶ್ರೇಷ್ಟರನು ಮುಳುಗಿಸಿಬಿಟ್ಟನಾತ ಕೆಂಪು ಸಮುದ್ರದಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು