Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:8 - ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪರಲೋಕದಿಂದ ನ್ಯಾಯ ನಿರ್ಣಯವನ್ನು ಮಾಡಿದ್ದೀರಿ. ದೇವರೇ, ನ್ಯಾಯತೀರಿಸುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:8
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಸರ್ವೇಶನಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I ಕದಲದ ಸ್ಥಿರತೆಯನು ಇತ್ತಿಹನೀ ಧರೆಗೆ II


ಕದನವಾಡಿದವು ತಾರೆಗಳು ಆಗಸದಿಂದಲೆ ಯುದ್ಧಮಾಡಿದವು ಸೀಸೆರನ ವಿರುದ್ಧ ತಮ್ಮಾ ಪಥದಿಂದಲೆ.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


“ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು