Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:18 - ಕನ್ನಡ ಸತ್ಯವೇದವು C.L. Bible (BSI)

18 ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ವಿುಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂವಿುಯು ಅಲ್ಲಾಡಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು. ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು. ಭೂಮಿಯು ಅಲ್ಲಾಡಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ಗುಡುಗಿನ ಶಬ್ದವು ಸುಂಟರಗಾಳಿಯಲ್ಲಿ ಕೇಳುತ್ತಿತ್ತು. ಮಿಂಚುಗಳು ಜಗತ್ತನ್ನು ಬೆಳಗಿಸಿದವು. ಭೂಮಿಯು ನಡುಗಿ ಕದಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:18
18 ತಿಳಿವುಗಳ ಹೋಲಿಕೆ  

ಇಳೆಯನು ಬೆಳಗಿಸುತ್ತದೆ ಆತನ ಮಿಂಚು I ನಡುಗುತ್ತದೆ ಭೂಮಿ ಅದಕೆ ಬೆಚ್ಚುಬಿದ್ದು II


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ ಮೊಳಗಿತು ವಾಣಿ ಆ ಪರಮೋನ್ನತನಿಂದ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು.


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,


ರವಿಯಂತಿದೆ ಆತನ ತೇಜಸ್ಸಿನ ಮೆರೆತ ಕಿರಣಗಳು ಹೊರಹೊಮ್ಮುತಿವೆ ಆತನ ಕರಗಳಿಂದ ಮರೆಯಾಗಿದೆ ಅಲ್ಲೇ ಆತನ ಶಕ್ತಿಸಾಮರ್ಥ್ಯ.


ತಲೆದೋರಿತು ಜಲ ನಿನ್ನ ಗದರಿಕೆಗೆ I ಹೆದರಿ ಹಿಂಜರಿಯಿತು ನಿನ್ನ ಗರ್ಜನೆಗೆ II


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಆಗ ಕಂಪಿಸಿತು ಭೂಮಿ ಗಡಗಡನೆ ಕದಲಿದವು ಆಗಸದಸ್ತಿವಾರಗಳು ಮಿಲಮಿಲನೆ ಏಕೆನೆ ಸಿಟ್ಟೇರಿತ್ತು ಆತನಿಗೆ.


ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.


ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II


ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು