Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:35 - ಕನ್ನಡ ಸತ್ಯವೇದವು C.L. Bible (BSI)

35 ನೆನೆದರಾಗ ದೇವರೇ ತಮಗಾಶ್ರಯ ದುರ್ಗವೆಂದು I ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದೇವರು ತಮ್ಮ ಶರಣನೂ ಪರಾತ್ಪರನು ತಮ್ಮ ವಿಮೋಚಕನೂ ಆಗಿದ್ದಾನೆ ಎಂಬದನ್ನು ನೆನಪಿಗೆ ತಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:35
19 ತಿಳಿವುಗಳ ಹೋಲಿಕೆ  

“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II


ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II


ಮರೆತೇಬಿಟ್ಟರು ಆತನ ಭುಜಬಲವನು I ವೈರಿಗಳಿಂದ ಬಿಡುಗಡೆಯಾದಾ ಸಮಯವನು II


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II


ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು