Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:4 - ಕನ್ನಡ ಸತ್ಯವೇದವು C.L. Bible (BSI)

4 ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನ ಘನತೆಯನ್ನೂ ಆತನ ಪರಾಕ್ರಮವನ್ನೂ ಅದ್ಭುತಕೃತ್ಯಗಳನ್ನೂ ಮುಂದಣ ಸಂತತಿಯವರಿಗೆ ವಿವರಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:4
17 ತಿಳಿವುಗಳ ಹೋಲಿಕೆ  

ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.


ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ; ಅವರು ತಮ್ಮ ಮಕ್ಕಳಿಗೆ ತಿಳಿಸಲಿ; ಅವರ ಮಕ್ಕಳು ಮುಂದಿನ ತಲೆಮಾರಿಗೆ ತಿಳಿಸಲಿ.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II


ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನು ಮುಚ್ಚುಮರೆಯಿಲ್ಲದೆ ಪ್ರಕಟಿಸಿದವುಗಳನು ಕೇಳು - ನಾನು ನಿನಗೆ ತಿಳಿಸುವೆನು:


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಆ ದಿನ ನೀವು ನಿಮ್ಮ ಮಕ್ಕಳಿಗೆ, “ನಮ್ಮ ಜನರು ಈಜಿಪ್ಟಿನಿಂದ ಹೊರಟು ಬಂದಾಗ ಸರ್ವೇಶ್ವರ ನಮಗೋಸ್ಕರ ಮಾಡಿದ ಉಪಕಾರವನ್ನು ಸ್ಮರಿಸುವುದಕ್ಕಾಗಿ ಈ ಆಚರಣೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಬೇಕು. ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದ್ದರಿಂದ ಅವರ ನಿಯಮ ನಮ್ಮ ಬಾಯಿಗೆ ಬರುತ್ತಿರಬೇಕು.


ಮುಂದಕ್ಕೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ವಿಧಿಯ ಅರ್ಥವೇನು?’ ಎಂದು ಕೇಳಿದಾಗ ನೀವು ಅವರಿಗೆ,


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು