Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:10 - ಕನ್ನಡ ಸತ್ಯವೇದವು C.L. Bible (BSI)

10 “ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮ್ಲೇಚ್ಫರು - ಅವರ ದೇವರು ಎಲ್ಲಿ ಎಂದು ಅನ್ನುವದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು ಜನಾಂಗಗಳಿಗೆ ಗೊತ್ತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅನ್ಯ ಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:10
22 ತಿಳಿವುಗಳ ಹೋಲಿಕೆ  

“ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಅನ್ಯಜನರು ನುಡಿಯುವುದೆಂತು : I “ಅವರ ದೇವರೆಲ್ಲಿ?” ಎಂದು II


ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


“ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು