Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:5
21 ತಿಳಿವುಗಳ ಹೋಲಿಕೆ  

ಒಡೆಯಾ, ಚಿರಮರೆಯಾಗಿರುವೆ? ಇನ್ನೆಷ್ಟರವರೆಗೆ? I ನಿನ್ನ ಕೋಪಾಗ್ನಿ ಎಡೆಬಿಡದೆ ಉರಿಯುತ್ತಿರಬೇಕೆ? II


ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ? ತಲತಲಾಂತರಗಳಿಗೂ ಕೋಪವನು ಬೆಳೆಸುವೆಯಾ?


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


ಆತನು ಸದಾ ತಪ್ಪು ಹುಡುಕುವವನಲ್ಲ I ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ II


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.


ನನ್ನ ಕಡೆ ತಿರುಗಿ ಪ್ರಭು, ನನ್ನನುದ್ಧರಿಸು I ನಿನ್ನಚಲ ಪ್ರೀತಿಯಿಂದ ನನ್ನ ರಕ್ಷಿಸು II


ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.


ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು