Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 82:2 - ಕನ್ನಡ ಸತ್ಯವೇದವು C.L. Bible (BSI)

2 “ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಅನ್ಯಾಯವಾಗಿ ತೀರ್ಪುಕೊಡುವದೂ ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವದೂ ಇನ್ನೆಷ್ಟರವರೆಗೆ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 82:2
16 ತಿಳಿವುಗಳ ಹೋಲಿಕೆ  

ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು