Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 82:3 - ಕನ್ನಡ ಸತ್ಯವೇದವು C.L. Bible (BSI)

3 ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ. ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ. ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 82:3
16 ತಿಳಿವುಗಳ ಹೋಲಿಕೆ  

ದಲಿತರಿಗೆ, ದಿಕ್ಕಿಲ್ಲದವರಿಗೆ ನ್ಯಾಯವನು ದೊರಕಿಸುವೆ I ಈ ಪರಿ ಇಳೆಮಾನವರ ತುಳಿತದಿಂದ ಪಾರುಮಾಡುವೆ II


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.


ಅಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.


“ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;


ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.


‘ನ್ಯಾಯಸ್ಥಾನದಲ್ಲಿ ನನಗೆ ಬೆಂಬಲವಿದೆ’ ಎಂದು ತಬ್ಬಲಿಯರ ಮೇಲೆ ನಾನು ಕೈಮಾಡಿದ್ದರೆ.


ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


:ಸತ್ಯಾನುಸಾರ ನ್ಯಾಯತೀರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು