Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:13 - ಕನ್ನಡ ಸತ್ಯವೇದವು C.L. Bible (BSI)

13 ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀತಿಯು ದೇವರ ಮುಂದೆ ನಡೆದುಕೊಂಡು ಹೋಗಿ, ದೇವರಿಗೆ ಮಾರ್ಗ ಸಿದ್ಧಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:13
18 ತಿಳಿವುಗಳ ಹೋಲಿಕೆ  

ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II


ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ನೀವು ಕ್ಷಾಮದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು