Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:9 - ಕನ್ನಡ ಸತ್ಯವೇದವು C.L. Bible (BSI)

9 ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:9
22 ತಿಳಿವುಗಳ ಹೋಲಿಕೆ  

ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ:


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಸಿಯೋನ್ ಪರ್ವತದ ಮೇಲೆಲ್ಲ, ಅಲ್ಲಿನ ಸಭಾಕೂಟಗಳ ಮೇಲೆಲ್ಲ ಹಗಲಲ್ಲಿ ಧೂಮಮೇಘವನ್ನು, ರಾತ್ರಿಯಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ದೇವರ ಮಹಿಮೆ ಛತ್ರಿಯಂತೆಯೂ ಚಪ್ಪರದಂತೆಯೂ ಎಲ್ಲರನ್ನು ಆವರಿಸುವುದು.


ದೂರವಿದೆ ದುರುಳರಿಗೆ ಆ ಜೀವೋದ್ಧಾರ I ಅವರಿಗಿದೆ ನಿನ್ನ ನಿಬಂಧನೆಗಳ ತಾತ್ಸಾರ II


ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು.


“ಸರ್ವೇಶ್ವರ ಕೊಟ್ಟ ಉತ್ತರವೇನು? ಸರ್ವೇಶ್ವರ ನುಡಿದದ್ದು ಏನು?” ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು


“ಸರ್ವೇಶ್ವರನಿಂದ ನಿಮಗೆ ಯಾವ ಉತ್ತರ ದೊರಕಿತು? ಸರ್ವೇಶ್ವರ ಏನು ನುಡಿದಿದ್ದಾರೆ?” ಎಂದು ಪ್ರವಾದಿಯನ್ನು ಕೇಳಿರಿ.


ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.


ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.


“ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು