Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 87:4 - ಕನ್ನಡ ಸತ್ಯವೇದವು C.L. Bible (BSI)

4 “ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಐಗುಪ್ತ ಬಾಬೆಲ್ ದೇಶಗಳವರನ್ನು ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್ ಜನಾಂಗಗಳು ಅಲ್ಲೇ ಹುಟ್ಟಿದವು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 87:4
25 ತಿಳಿವುಗಳ ಹೋಲಿಕೆ  

ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II


ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು I ದೇವರಿಗೆ ಕೈ ಮುಗಿವರು ಇಥಿಯೋಪಿಯದವರು II


ಚದರಿಸಿದೆ ನಿನ್ನ ಭುಜಬಲದಿಂದ ಶತ್ರುಗಳನು I ಛೇದಿಸಿ ಕೊಂದುಹಾಕಿದೆ ಆ ರಾಕ್ಷಸ ರಹಬನನು II


ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು.


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?


ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II


ಗೊಲ್ಯಾತನು ಅಲ್ಲೆ ನಿಂತು, ಇಸ್ರಯೇಲರ ಸೈನ್ಯದತ್ತ ಹೀಗೆಂದು ಗರ್ಜಿಸಿದನು: “ನೀವು ಸಜ್ಜಾಗಿ ಬಂದಿರುವುದು ಯುದ್ಧಮಾಡಲಿಕ್ಕೋ? ನಾನು ಫಿಲಿಷ್ಟಿಯನು. ನೀವು ಆ ಸೌಲನ ಗುಲಾಮರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು