Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:11 - ಕನ್ನಡ ಸತ್ಯವೇದವು C.L. Bible (BSI)

11 ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ ನಾಶಲೋಕದಲ್ಲಿ ನಿನ್ನ ಸತ್ಯತೆಯನ್ನೂ ಸಾರುವದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರ ಲೋಕದಲ್ಲಿ ನಿನ್ನ ನಂಬಿಗಸ್ತಿಕೆಯ ಬಗ್ಗೆ ಮಾತಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಮಾಧಿಯಲ್ಲಿ ನಿಮ್ಮ ಪ್ರೀತಿ ಸಾರಲಾಗುವುದೇ? ನಾಶನ ಸ್ಥಳದಲ್ಲಿ ನಿಮ್ಮ ನಂಬಿಗಸ್ತಿಕೆಯು ಹೇಳಲಾಗುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:11
11 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


“ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.


ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?


ಜಾರು ನೆಲದಲಿ ಆ ಜನರನು ನೀ ನಿಲ್ಲಿಸಿರುವೆ I ನಿಶ್ಚಯವಾಗಿ ನೀ ಬೀಳಿಸಿ ಅವರನು ನಾಶಮಾಡುವೆ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು