Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:26 - ಕನ್ನಡ ಸತ್ಯವೇದವು C.L. Bible (BSI)

26 ‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ನನ್ನೊಡನೆ - ನನ್ನ ತಂದೆಯೂ ದೇವರೂ ಆಶ್ರಯದುರ್ಗವೂ ನೀನೇ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನು, ‘ನೀವು ನನ್ನ ತಂದೆಯೂ ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:26
17 ತಿಳಿವುಗಳ ಹೋಲಿಕೆ  

ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


ಸರ್ವೇಶ್ವರನು ಚೈತನ್ಯಸ್ವರೂಪನು ನನ್ನುದ್ಧಾರಕನವಗೆ ಸ್ತುತಿಸ್ತೋತ್ರವು ನನ್ನಾಶ್ರಯಸಿರಿ ದೇವಗೆ ಜಯಕಾರವು.


ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II


ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.


ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು