Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:27 - ಕನ್ನಡ ಸತ್ಯವೇದವು C.L. Bible (BSI)

27 ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನೂ ಭೂರಾಜರಲ್ಲಿ ಉನ್ನತನನ್ನೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:27
17 ತಿಳಿವುಗಳ ಹೋಲಿಕೆ  

ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಅಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ ಅಭಿವೃದ್ಧಿಯಾಗುತ್ತಿದೆ ಅವರ ರಾಜ್ಯ.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.


ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.


ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


ಸರ್ವೇಶ್ವರನು ಚೈತನ್ಯಸ್ವರೂಪನು ನನ್ನುದ್ಧಾರಕನವಗೆ ಸ್ತುತಿಸ್ತೋತ್ರವು ನನ್ನಾಶ್ರಯಸಿರಿ ದೇವಗೆ ಜಯಕಾರವು.


ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು