Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:17 - ಕನ್ನಡ ಸತ್ಯವೇದವು C.L. Bible (BSI)

17 ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:17
22 ತಿಳಿವುಗಳ ಹೋಲಿಕೆ  

ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ನಮ್ಮ ದೇವನ ನಾಮವನು ಮರೆತಿದ್ದೆವಾದರೆ I ಅನ್ಯದೇವರಿಗೆ ನಾವು ಕೈ ಮುಗಿದಿದ್ದೆವಾದರೆ, II


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.


ನಿನ್ನ ಮರೆಯಲಿಲ್ಲ, ನಿನ್ನ ಒಪ್ಪಂದವನು ಮೀರಲಿಲ್ಲ I ಆದರೂ ಒದಗಿವೆಯಲ್ಲ ನಮಗೀ ಅನಾಹುತಗಳೆಲ್ಲ II


ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಜನಾಂಗಗಳ ದೃಷ್ಟಿಯಲ್ಲಿ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವೆ; ನಾನೇ ಸರ್ವೇಶ್ವರ ಎಂದು ಆಗ ನಿನಗೆ ಗೊತ್ತಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು