Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:4 - ಕನ್ನಡ ಸತ್ಯವೇದವು C.L. Bible (BSI)

4 ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕಗಳ ಮರೆಯನ್ನು ಆಶ್ರಯಿಸಿಕೊಳ್ಳುವಿ. ಆತನ ಸತ್ಯತೆಯೇ ನಿನಗೆ ಖೇಡ್ಯವೂ ಗುರಾಣಿಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:4
14 ತಿಳಿವುಗಳ ಹೋಲಿಕೆ  

ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II


ಗೂಡಿನಿಂದ ಮರಿಗಳನು ಹೊರಡಿಸಿದಾ ಗರುಡಪಕ್ಷಿ ಹಾರಾಡಿ ಅವು ಬೀಳದಂತೆ ಕಾಯುತ್ತದೆ ರೆಕ್ಕೆಗಳನು ಚಾಚಿ. ಅಂತೆಯೆ ಸರ್ವೇಶ್ವರ ಕಾಪಾಡಿದ ಇಸ್ರಯೇಲರನು ಕೈಚಾಚಿ.


ಖಡ್ಗ ಗುರಾಣಿಗಳನು ಧರಿಸಿಕೊ I ನನಗೆ ರಕ್ಷಣೆಯಾಗಿ ನಿಂತುಕೊ II


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ಭೂಮ್ಯಾಕಾಶಗಳು ಗತಿಸಿಹೋಗುವುವು, ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುವುವು.


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು