Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:2 - ಕನ್ನಡ ಸತ್ಯವೇದವು C.L. Bible (BSI)

2 ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ಪ್ರತಿಫಲವನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಭೂಲೋಕದ ನ್ಯಾಯಾಧಿಪತಿಯೇ, ಗರ್ವಿಷ್ಠರಿಗೆ ತಕ್ಕ ಪ್ರತೀಕಾರವನ್ನು ಸಲ್ಲಿಸ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:2
23 ತಿಳಿವುಗಳ ಹೋಲಿಕೆ  

ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಯಕೋಬ ವಂಶಜರೇ, ನಿಮ್ಮ ಎದುರಾಳಿಗಳ ಮೇಲೆ ನಿಮಗೆ ಜಯ ಲಭಿಸಲಿ. ನಿಮ್ಮ ಶತ್ರುಗಳೆಲ್ಲಾ ನಿರ್ಮೂಲವಾಗಲಿ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ಎಚ್ಚರಗೊಳ್ಳಲಿ, ದೇವನೆಚ್ಚರಗೊಳ್ಳಲಿ I ಆತನ ಶತ್ರುಗಳೆಲ್ಲರು ಚದರಿಹೋಗಲಿ I ಆತನ ವಿರೋಧಿಗಳು ಪಲಾಯನ ಗೈಯಲಿ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ಎದ್ದೇಳು ದೇವ, ಸ್ಥಾಪಿಸು ನ್ಯಾಯವನು ಧರೆಯೊಳು I ನಿನ್ನ ಸೊತ್ತಾಗಿವೆಯಲ್ಲವೆ ಸಮಸ್ತ ರಾಷ್ಟ್ರಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು