Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:5 - ಕನ್ನಡ ಸತ್ಯವೇದವು C.L. Bible (BSI)

5 ನಸುಕಿ ಹಾಕುತಿಹರು ನಿನ್ನ ಪ್ರಜೆಯನು I ಹಿಂಸಿಸುತಿಹರು ನಿನ್ನ ಸ್ವಕೀಯರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವಾಸ್ತ್ಯವನ್ನು ಕುಗ್ಗಿಸಿಬಿಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ಅವರು ನಿನ್ನ ಜನರಿಗೆ ಕೇಡುಮಾಡಿದ್ದಾರೆ. ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಿಮ್ಮ ಜನರನ್ನು ಅವರು ಕುಗ್ಗಿಸುತ್ತಾರೆ. ನಿಮ್ಮ ಬಾಧ್ಯತೆಯನ್ನು ಬಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:5
20 ತಿಳಿವುಗಳ ಹೋಲಿಕೆ  

ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.


ನುಂಗಿಬಿಟ್ಟರಾ ಜನರು ಯಕೋಬ ವಂಶದವರನು I ಹಾಳುಮಾಡಿ ಬಿಟ್ಟರವರ ನಿವಾಸ ಸ್ಥಳಗಳನು II


‘ನಾಶ ಮಾಡೋಣ ಈ ಜನರನು’ ಎಂದಾಡಿಕೊಂಡಿಹರು I ದೇಶದ ಸಭಾಮಂದಿರಗಳನ್ನೆಲ್ಲ ಭಸ್ಮಮಾಡಿಹರು II


ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ಅನ್ಯಾಯವಾಗಿ ವ್ಯಾಜ್ಯತೀರಿಸುವುದನ್ನೂ ಸ್ವಾಮಿ ಲಕ್ಷ್ಯಕ್ಕೆ ತಂದುಕೊಳ್ಳದೆ ಇರುತ್ತಾನೆಯೇ?


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು