Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 95:10 - ಕನ್ನಡ ಸತ್ಯವೇದವು C.L. Bible (BSI)

10 ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 95:10
18 ತಿಳಿವುಗಳ ಹೋಲಿಕೆ  

ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ?


ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,


ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.


ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು,


ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು