Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:9 - ಕನ್ನಡ ಸತ್ಯವೇದವು C.L. Bible (BSI)

9 ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ನಡುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:9
14 ತಿಳಿವುಗಳ ಹೋಲಿಕೆ  

ಸ್ತುತಿಸಿರಿ ಆತನ ಶ್ರೀನಾಮ ಮಹಿಮೆಯನು I ಪೂಜಿಸಿರಿ ಪವಿತ್ರಾಂಬರರಾಗಿ ಆತನನು II


ನಡುಗು ಭೂಲೋಕವೇ, ಪ್ರಭುವಿನ ಮುಂದೆ I ನಡುನಡುಗು ಯಕೋಬ ದೇವರ ಮುಂದೆ II


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ಪೊಡವಿಯೆಲ್ಲವು ಭಯಪಡಲಿ ಪ್ರಭುವಿಗೆ I ಅಡಗಿ ನಡೆಯಲಿ ನಾಡಿಗರೆಲ್ಲ ಆತನಿಗೆ II


“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ದಹನಬಲಿ ಸಮರ್ಪಣೆಯು ಮುಗಿಯುವವರೆಗೆ ಸಭೆಸೇರಿದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಇದ್ದರು; ಗಾಯಕರು ಗಾನ ಮಾಡುತ್ತಾ ಇದ್ದರು; ತುತೂರಿ ಊದುವವರು ಊದುತ್ತಾ ಇದ್ದರು.


ದಹನಬಲಿ ಸಮರ್ಪಣೆ ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು