Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:15 - ಕನ್ನಡ ಸತ್ಯವೇದವು C.L. Bible (BSI)

15 ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕ್ರಿಸ್ತ್ ಕೊನಾಕ್ಬಿ ದಿಸಿನಸಲ್ಲ್ಯಾ ದೆವಾಚೊ ಪ್ರತಿರುಪ್ ಹೊವ್ನ್ ಹಾಯ್, ರಚುನ್ ಹೊಲ್ಲ್ಯಾ ಸಗ್ಳ್ಯಾಕ್ ಜೆಜು ಮುಳ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:15
23 ತಿಳಿವುಗಳ ಹೋಲಿಕೆ  

ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು