Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:23 - ಕನ್ನಡ ಸತ್ಯವೇದವು C.L. Bible (BSI)

23 ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತುಮಿ ಆಯ್ಕಲ್ಯಾ ಬರ್‍ಯಾ ಖಬ್ರೆ ವೈರ್ ತುಮ್ಕಾ ಹೊತ್ತ್ಯಾ ವಿಶ್ವಾಸಾರ್ ಘಟ್ಟ್ ಇಬೆ ರ್‍ಹಾವ್ನ್ ತೆಚ್ಯಾಕ್ನಾ ಯೆಲ್ಲೊ ಬರೊಸೊ ಸೊಡುನ್ ಜಾಯ್ನಸ್ಲ್ಯಾರ್, ಹೆ ಹೊತಾ, ಹಿ ಬರಿ ಖಬರ್ ಜಗಾಚ್ಯಾ ಸಗ್ಳ್ಯಾ ಲೊಕಾಕ್ನಿ ಪರ್ಗಟ್ ಕರುನ್ ಹೊಲಾ, ಪಾವ್ಲು ಮನ್ತಲೊ ಮಿಯಾ ಹಿ ಬರಿ ಖಬರ್ ಪರ್ಗಟ್ ಕರ್‍ತಲೊ ಸೆವಕ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:23
72 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.


ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು?


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ.


ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.


ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.


ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಎದ್ದು ನಿಂತುಕೋ; ನಿನ್ನನ್ನು ನನ್ನ ದಾಸನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಿಕೊಳ್ಳುವುದಕ್ಕಾಗಿ ನಿನಗೆ ದರ್ಶನವಿತ್ತಿದ್ದೇನೆ. ಈ ದರ್ಶನದಲ್ಲಿ ನನ್ನ ವಿಷಯವಾಗಿ ಕಂಡದ್ದನ್ನು ಮತ್ತು ಮುಂದಿನ ದರ್ಶನಗಳಲ್ಲಿ ನಾನು ನಿನಗೆ ತೋರಿಸಲಿರುವ ವಿಷಯಗಳನ್ನು ಕುರಿತು ಬೇರೆಯವರಿಗೆ ನೀನು ತಿಳಿಸಬೇಕು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು. ನಾವು ಕೈಗೊಂಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದವನು.


ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.


ಸಿಟ್ಟುಗೊಂಡು ಅವರನ್ನು ಹಿಂದಟ್ಟು ನಿನ್ನ ಆಕಾಶದ ಕೆಳಗಿನಿಂದ ಅವರನ್ನು ಅಳಿಸಿಹಾಕು".


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು