Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:27 - ಕನ್ನಡ ಸತ್ಯವೇದವು C.L. Bible (BSI)

27 ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಹಿಮೆನ್ ಭರುನ್ ಹೊತ್ತೆ ಹೆ ಖರೆ, ದುಸ್ರ್ಯಾ ಲೊಕಾಕ್ನಿ ಕಳ್ವುಕ್ ದೆವಾನ್ ನಿರ್ದಾರ್ ಕರ್‍ಲ್ಯಾನ್, ಹೆ ಮೊಟೆ ಖರೆ ಸಗ್ಳ್ಯಾ ಲೊಕಾಕ್ನಿ ಪರ್ಗಟ್ ಹೊಲೆ. ತುಮ್ಚ್ಯಾಕ್ಡೆ ಹೊತ್ತೊ ಕ್ರಿಸ್ತುಚ್ ತೆ ಖರೆ ಹೊವ್ನ್ ಹಾಯ್ ದೆವಾಚ್ಯಾ ಮಹಿಮೆತ್ ವಾಟೊ ಘೆವ್ಕ್ ತೊಚ್ ಅಮ್ಕಾ ಹೊತ್ತೊ ಎಕ್ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:27
39 ತಿಳಿವುಗಳ ಹೋಲಿಕೆ  

ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.


ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು