Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:29 - ಕನ್ನಡ ಸತ್ಯವೇದವು C.L. Bible (BSI)

29 ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲವನ್ನು ಪ್ರಯೋಗಮಾಡಿ ಇದಕ್ಕೋಸ್ಕರವೇ ಹೋರಾಡುತ್ತೇನೆ, ಪ್ರಯಾಸಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಹೆಚ್ಯಾಸಾಟಿಚ್ ಕ್ರಿಸ್ತಾನ್ ದಿಲ್ಲ್ಯಾ ಬಳಾನ್ ಕಾಮ್ ಕರ್‍ತಾ ಅನಿ ಹೊರಾಟ್ ಕರ್‍ತಾ, ತೊ ಬಳುಚ್ ಮಾಜ್ಯಾ ಜಿವನಾತ್ ಕಾಮ್ ಕರುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:29
28 ತಿಳಿವುಗಳ ಹೋಲಿಕೆ  

ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು.


ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.


ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.


ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.


ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.


ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.


ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ನಿಮ್ಮ ಹೋರಾಟವೂ ನಮ್ಮ ಹೋರಾಟವೂ ಒಂದೇ ಆಗಿದೆ. ನಾನು ಕ್ರಿಸ್ತಯೇಸುವಿಗಾಗಿ ಪಟ್ಟ ಕಷ್ಟವನ್ನು ನೀವು ಕಂಡಿದ್ದೀರಿ. ಈಗಲೂ ಅನುಭವಿಸುತ್ತಿದ್ದೇನೆಂದು ಅರಿತಿದ್ದೀರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಕ್ರಿಸ್ತಯೇಸುವೇ ನನ್ನ ಮುಖಾಂತರ ಮಾತನಾಡುತ್ತಾರೆ ಎಂಬುದಕ್ಕೆ ಆಧಾರ ಬೇಕೆನ್ನುತ್ತೀರಲ್ಲವೇ? ಯೇಸುಕ್ರಿಸ್ತರು ನಿಮ್ಮ ವಿಷಯದಲ್ಲಿ ದುರ್ಬಲರಾಗಿ ವರ್ತಿಸಲಿಲ್ಲ. ಪ್ರಬಲರಾಗಿ ನಿಮ್ಮಲ್ಲಿಯೇ ಇದ್ದಾರೆ ಎಂಬುದೇ ಇದಕ್ಕೆ ಆಧಾರ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.


ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.


ಶಕ್ತಿಸಾಮರ್ಥ್ಯವು ನಾನಾ ವಿಧ; ಅವುಗಳನ್ನು ಎಲ್ಲರಲ್ಲೂ ಸಾಧಿಸುವ ದೇವರು ಒಬ್ಬರೇ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.


ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು